BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಮಣಿಪಾಲ : ವಿಷುಕಣಿ-ಕವಿದನಿ" ಬಹು ಭಾಷಾ ಕವಿಗೋಷ್ಠಿ ಸಂಪನ್ನ

ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರ, ಮಣಿಪಾಲ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ "ವಿಷುಕಣಿ-ಕವಿದನಿ" ಬಹು ಭಾಷಾ ಕವಿಗೋಷ್ಠಿ ಮಾ.10 ಗುರುವಾರ ರೇಡಿಯೊ ಮಣಿಪಾಲ್, ಎಂ.ಐ.ಸಿ ಕ್ಯಾಂಪಸ್ ಮಣಿಪಾಲದಲ್ಲಿ ನಡೆಯಿತು.

 

ಸಭಾ ಕ್ರಾಯಕ್ರಮ ಉದ್ಘಾಟನೆಯನ್ನು ಡಾ. ಶುಭ ಹೆಚ್. ಎಸ್‌. ನಿರ್ದೇಶಕರು, ಮಣಿಪಾಲ್ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ ಮಾಹೆ ಮಣಿಪಾಲ ಇವರು ನೆರವೇರಿಸಿ ಮಾತನಾಡಿ, ಕವನಗಳಿಗೆ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಅವಕಾಶವಿದೆ, ಹೀಗಾಗಿ ಕವಿತೆಗಳಿಗೆ ವಿಮಶೆ೯ಯ ಅವಶ್ಯಕತೆ ಎದುರಾಗುವುದಿಲ್ಲ, ಯುಗಾದಿ ಹಬ್ಬದ ಕುರಿತು ನಮ್ಮಲ್ಲಿರುವ ಸಂಸ್ಕೃತಿ ಆಚಾರಗಳನ್ನು ಕವನಗಳ ಮೂಲಕ ಪ್ರಚುರಪಡಿಸುವ ಈ ಅಪೂವ೯ ಅವಕಾಶ ಸಿಕ್ಕಿರುವುದು ಎಲ್ಲರಿಗೂ ಅಭಿನಂದ ನೀಯ ವಿಚಾರ ಎಂದರು.

ಸಭಾಧ್ಯಕ್ಷತೆಯನ್ನು ಭಾಷಾ ತಜ್ಞ ನಾಡೋಜ ಪ್ರೊ. ಕೆ.ಪಿ. ರಾವ್ ವಹಿಸಿ, ಮಾತನಾಡಿ ಭಾಷೆಗಳನ್ನು ಉಳಿಸಿ ಬೆಳೆಸಬೇಕು ಇಲ್ಲವಾದಲ್ಲಿ ಭಾಷೆಯೊಂದಿಗೆ ಅದರ ಅಪೂವ೯ ಸಂಸ್ಕೃತಿ ಕೂಡ ಅವನತಿ ಯಾಗುವ ಸಂಭವವಿರುತ್ತದೆ. ನಮ್ಮ ದೇಶದಲ್ಲಿರುವ ಹಲವಾರು ಭಾಷೆಗಳು ಅವನತಿಯ ಹಾದಿಯಲ್ಲಿ ರುವುದು ದುಃಖದ ವಿಷಯ ಎಂದರು.


 ಮುಖ್ಯ ಅತಿಥಿ ಪೂರ್ಣಿಮಾ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ಯು ಉಡುಪಿ  ಕಸಾಪ ಉಡುಪಿ ತಾಲೂಕು ಈ ರೀತಿಯ ವಿನೂತನ ಕಾಯ೯ಕ್ರಮಗಳ ಮೂಲಕ ರಾಜ್ಯದಲ್ಲಿ ಮಾದರಿಯಾಗಿದೆ ಎಂದರು. 


 ರವಿರಾಜ್ ಎಚ್‌. ಪಿ.ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಉಪಸ್ಥಿತರಿದ್ದರು. ಕಸಾಪ ಜಿಲ್ಲಾ ಮಾಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಶುಭ ಹಾರೈಸಿದರು. ಕವಿಗೋಷ್ಠಿಯ ಸಮನ್ವಯಕಾರರಾಗಿ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಭಾಗವಹಿಸಿ'ಕವನಗಳು ಹುಟ್ಟುವ ಬಗ್ಗೆ ಅದೇ ರೀತಿ ಕವನಗಳನ್ನು ಮತ್ತಷ್ಟು ಆಕಷ೯ಕವಾಗಿ ಬರೆಯುವ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಕವಿಗಳಾದ ಕವಿತಾ ಎಸ್ ಮಣಿಪಾಲ (ಹವ್ಯಕ ಕನ್ನಡ), ವೈಷ್ಣವಿ ಸುಧೀಂದ್ರ ರಾವ್ (ಕುಂದಾಪ್ರ ಕನ್ನಡ), ರಾಮಾಂಜಿ ಉಡುಪಿ (ಕನ್ನಡ), ಮಾಲತಿ ರಮೇಶ್ ಭಂಡಾರಿ ಕೆಮ್ಮಣ್ಣು (ತುಳು), ಕೆ. ವಾಣಿಶ್ರೀ ಅಶೋಕ್ ಐತಾಳ್ (ತೆಲುಗು), ಪ್ರಣತಿ ಪಿ. ಭಟ್ ಮಣಿಪಾಲ (ಹಿಂದಿ), ವಿನೋದ ಪಡುಬಿದ್ರಿ (ತುಳು), ವಿಜಯಲಕ್ಷ್ಮೀ ಆರ್. ಕಾಮತ್ (ಕೊಂಕಣಿ), ಮನೋಹರ ಶೆಟ್ಟಿ ಬಿಟ್ಕಲ್ ಕಟ್ಟೆ (ತುಳು), ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ (ಮಲಯಾಳಂ), ವಸುಧಾ ಅಡಿಗ ನೀಲಾವರ (ಕನ್ನಡ), ಲಲಿತ ಪ್ರದೀಪ್ ಭಟ್ (ಕನ್ನಡ) ಮಂಜುನಾಥ ಮರವ೦ತೆ (ಕುಂದಾಪ್ರ ಕನ್ನಡ), ಸುಲೋಚನ ಪಚ್ಚಿನಡ್ಕ (ತುಳು), ನೀಮಾ ಲೋಬೊ ಶಂಕರಪುರ (ಕೊಂಕಣಿ), ಪುಂಡಲೀಕ ನಾಯಕ್ ಬೈಂದೂರು ಇವರೆಲ್ಲರು ಸ್ವರಚಿತ ಕವನ ವಾಚಿಸಿದರು.


ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು  ಸ್ವಾಗತಿಸಿದರು. ಡಾ. ಡಾ. ಅಮ್ಮೆಂಬಳ,  ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರು, ರೇಡಿಯೊ ಮಣಿ ಪಾಲ್ ಇವರು ಪ್ರಸ್ತಾಪಿಸಿದರು. ಕಸಾಪ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲ್ ವಂದಿಸಿದರು. ಸುಲೋಚನಾ ಪಚ್ಚಿನಡ್ಕಹಾಗು ವಸುಧಾ ಅಡಿಗ ನೀಲಾವರ  ನಿರೂಪಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!