Header Ads Widget

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ತಾರೀಕು 27ರ ಮಂಗಳವಾರದಂದು ಶ್ರೀ ಲಲಿತಾ ಸಹಸ್ರ ಕದಳಿಯಾಗವು  ನೆರವೇರಲಿರುವುದು.

ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಬಹು ವಿಶಿಷ್ಟವೂ ಅಪರೂಪವೂ ಆದ ಈ ಮಹಾನ್ ಯಾಗದಿಂದ ಇಹದಲ್ಲಿ ಭೋಗಪರದಲ್ಲಿ ಮೋಕ್ಷವನ್ನು ಪಡೆಯಬಹುದಾಗಿದೆ.

ಯಾಗದ ಪ್ರಯುಕ್ತ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾದನೆ ಬ್ರಾಹ್ಮಣರಾಧನೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.