Header Ads Widget

ಶಾರದಾ ಕಲೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಉಡುಪಿಯ ಅಮೋಘ್ ಕಂಬಳಕಟ್ಟ

ಬೆಂಗಳೂರಿನ ಶ್ರೀ ಶಾರದಾ ಕಲಾವೇದಿಕೆಯವರು ಎರಡನೇ ವಾರ್ಷಿಕೋತ್ಸವದ ಪ್ರಯುಕ್ತ ನೀಡುವ 2024-25ನೇ ಸಾಲಿನ "ಶಾರದಾ ಕಲೋತ್ಸವ ಪ್ರಶಸ್ತಿ"ಗೆ ಬಹುಮುಖ ಪ್ರತಿಭೆ ಅಮೋಘ್ ಕಂಬಳಕಟ್ಟ ಆಯ್ಕೆಯಾಗಿದ್ದಾರೆ. ಉಡುಪಿಯ ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಅಮೋಘ್ ಕಂಬಳಕಟ್ಟ ಅವರು ಸಂಗೀತ, ಚಿತ್ರಕಲೆ, ಸಾಹಿತ್ಯ ಮತ್ತು ಯಕ್ಷಗಾನ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜೂನ್ 1ರಂದು ಬೆಂಗಳೂರಿನಲ್ಲಿ ನಡೆಯುವ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕರಾದ ಶ್ರೀ ಸತ್ಯ ಮಲ್ನಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.