Header Ads Widget

ಮಂಗಳೂರು: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ; ಇಬ್ಬರು ಮಕ್ಕಳಿಗೆ ಚೂರಿ ಇರಿತ!

ಚೂರಿಯಿಂದ ಇರಿದು ವ್ಯಕ್ತಿಯೊಬ್ಬರ ಕೊಲೆಯಾದ ಘಟನೆ ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಮೇ 22ರ ಗುರುವಾರ ನಡೆದಿದೆ.

ಸುಲೈಮಾನ್ ಕೊಲೆಯಾದ ವ್ಯಕ್ತಿ. ವಳಚ್ಚಿಲ್ ನಿವಾಸಿ ಮುಸ್ತಾಫ ಎಂಬಾತನಿಂದ ಚೂರಿ ಇರಿತ.

ಕುಟುಂಬದವರೊಂದಿಗೆ ಮದುವೆ ಮಾತುಕತೆ ನಡೆಸುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಮುಸ್ತಾಫ ಚೂರಿಯಿಂದ ಇರಿದು ಸುಲೈಮಾನ್ ನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸುಲೈಮಾನ್ ಅವರೊಂದಿಗೆ ಇಬ್ಬರು ಮಕ್ಕಳಿಗೂ ಚೂರಿಯಿಂದ ಇರಿದಿರುವ ಮುಸ್ತಾಫ.

ಸಂಬಂಧಿ ಮುಸ್ತಾಫನಿಗೆ ಸಲ್ಮಾನ್‌ ಮದುವೆ ಮಾಡಿಸಿದ್ದ. ಮದುವೆಯ ವೇಳೆ ಮುಸ್ತಾಫ ಮತ್ತು ಸಲ್ಮಾನ್‌ ನಡುವೆ ವೈಮನಸ್ಸು ಉಂಟಾಗಿತ್ತು. ಈ ವಿಚಾರ ಕುರಿತು ಮಾತನಾಡಲು ಮುಸ್ತಾಫ ಸಲ್ಮಾನ್‌ ಅವರನ್ನು ಕರೆಸಿದ್ದ. ಹೀಗಾಗಿ ತನ್ನ ಇಬ್ಬರು ಪುತ್ರರ ಜೊತೆ ಮುಸ್ತಾಫ ಬಳೀ ಸಲ್ಮಾನ್‌ ಬಂದಿದ್ದು, ಈ ಸಂದರ್ಭ ವಾಗ್ವಾದ ನಡೆದು ಸಲ್ಮಾನ್‌ಗೆ ಮುಸ್ತಾಫ ಚಾಕುವಿನಿಂದ ಇರಿದಿದ್ದಾನೆ.

ತಂದೆಯ ರಕ್ಷಣೆಗೆಂದು ಬಂದ ಇಬ್ಬರು ಪುತ್ರರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸಿಯಾಬ್ ಎಂಬಾತನ ಎದೆಗೆ ಚೂರಿಯಿಂದ ಇರಿದಿದ್ದು, ಆತ ನಗರದ ಪಡೀಲ್ ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಿಯಾಬ್ ಎಂಬಾತನ ಕೈಗೆ ಇರಿದು ಗಾಯಗೊಳಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.