ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಲ್ಪೆ ಫಿಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಮನವಿಯ ಮೇರೆಗೆ ಹೆದ್ದಾರಿ ಕಾಮಗಾರಿಗಾಗಿ ತೆರವು ಮಾಡಿರುವ ಶಾಲೆಯ ಆವರಣ ಗೋಡೆಯನ್ನು ಮಾಡಿದ್ದು, ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಮರು ನಿರ್ಮಾಣ ಮಾಡುವಂತೆ ರಾಷ್ಟೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲ್ಪೆ ಎಳೂರು ಮೊಗವೀರ ಭವನದ ಬಳಿ ಈ ಹಿಂದೆ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಿದ್ದ ಬಸ್ಸು ನಿಲ್ದಾಣವನ್ನು ತೆರವು ಮಾಡಿದ್ದು, ಈಗ ಯಾವುದೇ ಬಸ್ ನಿಲ್ದಾಣವಿಲ್ಲದೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಬಿಸಿಲು ಗಾಳಿ ಮಳೆಗೆ ರಕ್ಷಣೆ ಇಲ್ಲದೆ ತೊಂದರೆ ಎದುರಿಸುತ್ತಿದ್ದು, ಬಾಕಿ ಉಳಿದಿರುವ ಮರವನ್ನು ತೆರವು ಮಾಡಿ ತಾತ್ಕಾಲಿಕ ಬಸ್ಸು ನಿಲ್ದಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮುಂದಿನ ಹಂತದಲ್ಲಿ ಕಟ್ಟಡಗಳ ತೆರವು ಸಂದರ್ಭದಲ್ಲಿ ಕಟ್ಟಡಗಳ ಮಾಲೀಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಹಕಾರ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀ ಸುಂದರ ಕಲ್ಮಾಡಿ, ಶ್ರೀಮತಿ ಎಡ್ಲಿನ್ ಕರ್ಕಡ, ಶ್ರೀ ಶ್ರೀಶ ಕೊಡವೂರು, ಶ್ರೀಮತಿ ಲಕ್ಷ್ಮೀ ಮಂಜುನಾಥ, ರಾಷ್ಟೀಯ ಹೆದ್ದಾರಿ ಇಲಾಖೆಯ ಶ್ರೀ ಮಂಜುನಾಥ ನಾಯಕ್, ಸ್ಥಳೀಯ ಮುಖಂಡರಾದ ಶ್ರೀ ಮಂಜು ಕೊಳ, ಶ್ರೀ ಸುರೇಶ್ ಕುಂದರ್, ಫೀಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.