ಶ್ರೀ ಕನಕದಾಸ ಸಮಾಜ ಸೇವಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಕೆ ಸಲ್ಲಿಕೆ

 

ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ವರೂಪ ಟಿ ಕೆ ಇವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಲಾಯಿತು. 

ಉಡುಪಿ ನಗರದಲ್ಲಿ ಕನಕದಾಸ ವೃತ್ತ ಹಾಗೂ ಉಡುಪಿ ಶ್ರೀ ಕೃಷ್ಣ ಮಠದ ಕನಕದಾಸ ರಸ್ತೆಗೆ ಸ್ವಾಗತ ಗೋಪುರ ನಿರ್ಮಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಿದ್ದರಾಜು ಕೆ ಎಸ್, ಜಿಲ್ಲಾಧ್ಯಕ್ಷ ಹನುಮಂತ ಎಸ್ ಡೊಳ್ಳಿನ, ಕಾರ್ಯಾಧ್ಯಕ್ಷ ಹನುಮಂತ ಬ ಆಡಿನ, ಸಂಘಟನಾ ಕಾರ್ಯದರ್ಶಿ ದೇವು ಎಸ್. ಪೂಜಾರಿ, ಉಡುಪಿ ತಾಲೂಕು ಅಧ್ಯಕ್ಷ ವೀರೇಶ್ ಪಿ ಕುಚಲ್, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು