ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರಕ್ಕೆ ಮೇಲಿಂದ ಮೇಲೆ ವಿಘ್ನಗಳು ಸಂಭವಿಸುತ್ತಿವೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿವಿಧ ಕಾರಣಗಳಿಂದ ಮೂರು ಜನ ಕಲಾವಿದರು ದುರ್ಮರಣಕ್ಕೀಡಾಗಿದ್ದಾರೆ. ಈಗ ಮತ್ತೊಂದು ಭಾರೀ ಅವಘಡ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯ ಪ್ರದೇಶದಲ್ಲಿ ಚಿತ್ರೀಕರಣ ಮಾಡುತ್ತಿ ದ್ದಾಗ ಚಿತ್ರೀಕರಣದ ದೋಣಿ ನೀರಿನಲ್ಲಿ ಮುಳುಗಿದೆ. ದೋಣಿಯಲ್ಲಿದ್ದ ನಟ ರಿಷಬ್ ಶೆಟ್ಟಿ ಸೇರಿ ಒಟ್ಟು 30 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ದೋಣಿ ಮಗುಚಿದ ತಕ್ಷಣ ಕಲಾವಿದರು, ತಂತ್ರಜ್ಞರು ಈಜಿ ದಡಸೇರಿದ್ದಾರೆ ಎಂಬ ಮಾಹಿತಿ ಇದ್ದು, ದೋಣಿಯಲ್ಲಿದ್ದ ಕ್ಯಾಮರಾ, ಇತರೆ ಸಲಕರಣೆಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ. ಯಾವುದೇ, ಸಾವು-ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ತೀರ್ಥಹಳ್ಳಿ ತಾಲೂಕಿನ ಮಾಣಿ ಜಲಾಶಯದ ವರಾಹಿ ಹಿನ್ನೀರಿನ ಪ್ರದೇಶದಲ್ಲಿ ಈ ಶೂಟಿಂಗ್ ನಡೆದಿದ್ದು, ಮುಳುಗಡೆ ಪ್ರದೇಶವಾದ ಮೇಲಿನ ಕೊಪ್ಪ ಎಂಬಲ್ಲಿ ಈ ಅವಘಡ ಸಂಭವಿಸಿದ್ದು, ಮುಳು ಗಡೆ ಪ್ರದೇಶವಾಗಿದ್ದರಿಂದ ಹೆಚ್ಚಿನ ನೀರಿರಲಿಲ್ಲ ಎಂದು ತಿಳಿದುಬಂದಿದೆ.
0 ಕಾಮೆಂಟ್ಗಳು