ಎಂಜಿಎಂ ಕಾಲೇಜಿನ ವಿಶ್ರಾಂತ ಪ್ರಾಶುoಪಾಲರು, ನಿರಂತರ ಕಲೆ ಹಾಗು ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿ ಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ಗುರುವಾರದಂದು ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ ಗೌರವಿಸಲಾಯಿತು.
ಪ್ರಾರಂಭದಲ್ಲಿ ಆಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆ ಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು. ಇತ್ತೀಚಿಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು
ಈ ಸಂದರ್ಭದಲ್ಲಿ ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗೌರಾವಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಉದ್ಯಮಿ ವಿಶ್ವನಾಥ ಶೆಣೈ, ಕೋಶಾಧಿಕಾರಿ ಚೈತನ್ಯ ಎಂ ಜಿ. , ವಿವೇಕಾನಂದ ಹಾಗು ಪ್ರಭಾಕರ ಭಂಡಾರಿ ಉಪಸ್ಥಿತರಿದ್ದ
0 ಕಾಮೆಂಟ್ಗಳು