Header Ads Widget

ವೈದ್ಯ ವೃತ್ತಿಯನ್ನು ಸೇವಾ ಮನೋಭಾವದಿಂದ ಮಾಡಿದರೆ ಸಮಾಜಕ್ಕೆ ಬಹಳಷ್ಟು ಉಪಯೋಗ~ ಅಪರ ಜಿಲ್ಲಾಧಿಕಾರಿ ಅಭಿದ್​ ಗದ್ಯಾಳ್​

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ವಿಶ್ವದ ಗಮನಸೆಳೆದಿದೆ ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​ ಭಾನುವಾರ ಆದರ್ಶ ಚಾರಿಟೇಬಲ್​ ಟ್ರಸ್ಟ್​ ಮತ್ತು ಆದರ್ಶ ಆಸ್ಪತ್ರೆ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಬೃಹತ್​ ಉಚಿತ ವೈದ್ಯಕಿಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದರು.​ 


ಶಿಕ್ಷಕರು ಮತ್ತು ವೈದ್ಯರು ಸಂಬಳ ಪಡೆದರೂ ಸೇವಾ ಮನೋಭಾವ ದಿಂದ ಕಾರ್ಯನಿರ್ವ ಹಿಸುತ್ತಿದ್ದಾರೆ. ಸಮಾಜದ ಉನ್ನತಿಯಲ್ಲಿ ಈ ಎರಡೂ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ ಎಂದರು.  


ಅಪರ ಜಿಲ್ಲಾಧಿಕಾರಿ ಅಭಿದ್​ ಗದ್ಯಾಳ್​ ಮಾತನಾಡಿ, ಪ್ರಪಂಚದ ಅತ್ಯಂತ ಕ್ಲಿಷ್ಟ ಯಂತ್ರ ವೆಂದರೆ ಮಾನವ ಶರೀರ. ಇದನ್ನು ಸುಸ್ಥಿತಿಯಲ್ಲಿಡಬೇಕಾದರೆ ಅಪಾರ ಜ್ಞಾನ ಮತ್ತು ಪರಿಣತಿ ಬೇಕು. ವೈದ್ಯ ವೃತ್ತಿಯನ್ನು ಸೇವಾ ಮನೋಭಾವದಿಂದ ಮಾಡಿದರೆ ಸಮಾಜಕ್ಕೆ ಬಹಳಷ್ಟು ಉಪಯೋಗವಾಗಲಿದೆ ಎಂದರು.  


ಆದರ್ಶ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ಜಿ. ಎಸ್​. ಚಂದ್ರಶೇಖರ್​ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯ್​ ಕುಮಾರ್​ ಸೊರಕೆ, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ ಉಪಸ್ಥಿತರಿದ್ದರು.

 
ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಪ್ರೊ. ಎನ್​.ಆರ್​. ರಾವ್​, ಡಾ. ನಾಗರತ್ನಾ ಶಾಸ್ತ್ರಿ, ಡಾ. ರಾಮರಾವ್​, ಡಾ. ವಾಸುದೇವ ಉಪಾಧ್ಯಾಯ, ಡಾ. ಪ್ರಶಾಂತ್​ ಭಟ್​, ಡಾ. ಶಶಿಕಿರಣ್​ ಆಚಾರ್​, ಡಾ. ಭವಾನಿ ಶಂಕರ್​ ಅವರನ್ನು ಸನ್ಮಾನಿಸಲಾಯಿತು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು