ಉಡುಪಿ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಇದರ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಮೊದಲ ಜಾನಪದ ಸಮ್ಮೇಳನದಲ್ಲಿ ಜೀಶಂಪ ಪರಮಶಿವಯ್ಯ ಪ್ರಶಸ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ನಿವೃತ್ತ ಐಎಎಸ್ ಅಧಿಕಾರಿ ಜಾನಪದ ತಜ್ಞ ಡಾ. ಸಿ. ಸೋಮಶೇಖರ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಬೇಲಿ ಮಠದ ಡಾ. ಅಲ್ಲಮ ಪ್ರಭು ಸ್ವಾಮಿಜಿ, ಪ್ರಭು ಚೆನ್ನಬಸವ ಸ್ವಾಮಿಜಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಬಂಜಾರ ಅಭಿವೃದ್ದಿ ಅಕಾಡೆಮಿಯ ಅಧ್ಯಕ್ಷ ಡಾ. ಗೋವಿಂದ ಸ್ವಾಮಿ, ಖ್ಯಾತ ಗಾಯಕ ಗುರುರಾಜ ಹೊಸಕೋಟೆ ಹುಲಿಕಲ್ ನಾಗರಾಜ್ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷ ಡಾ. ಜನಪದ ಬಾಲಾಜಿ ಉಪಸ್ಥಿತರಿದ್ದರು.
0 ಕಾಮೆಂಟ್ಗಳು