ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಗುರುವಾರ ರಾತ್ರೀ ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಮೋಹೋತ್ಸವ ಅಂಗವಾಗಿ ಪಲ್ಲಕ್ಕಿ ಉತ್ಸವ ನೆಡೆಯಿತು. ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಜರಗಿತು. ಅರ್ಚಕರಾದ ಓಂ ಪ್ರಕಾಶ್, ಅಮಿತ್ ಶುಕ್ಲಾ ಧಾರ್ಮಿಕ ಪೂಜಾ ಕಾರ್ಯ ನೆಡೆಸಿಕೊಟ್ಟರು.
ಕೆ ದಿವಾಕರ್ ಶೆಟ್ಟಿ ತೋಟದಮನೆ ಕೊಡವೂರು, ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಬನ್ನಂಜೆ, ಕಾರ್ಯದರ್ಶಿ ಈಶ್ವರ ಶೆಟ್ಟಿ ಚಿಟ್ಪಾಡಿ, ತೋನ್ಸೆ ನವೀನ್ ಶೆಟ್ಟಿ, ಮೋಹನ್ ಚಂದ್ರ ನಂಬಿಯಾರ್, ವಿಶ್ವನಾಥ್ ಶೆಟ್ಟಿ ಕಡೆಕಾರ್, ಡಾ ದೀಪಕ್ ಪ್ರಭು, ರವೀಂದ್ರ ಪುತ್ರನ್, ತಾರಾನಾಥ್ ಮೇಸ್ತ, ಸಾವಿರಾರು ಭಕ್ತರೂ ಪೂಜೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು.
0 ಕಾಮೆಂಟ್ಗಳು