Header Ads Widget

​ಜಿ ಎಸ್ ಟಿ ಸೊಲ್ಯೂಷನ್ಸ್ ಕಾರ್ಯಕ್ರಮ


ನಮ್ಮ ಜಿಲ್ಲೆಯ ಸರ್ವತೋಮುಕ ಬೆಳವಣಿಗೆಗೆ ಪ್ರಮುಖ ಕಾರಣ ಕರ್ತರು ಗಳಾದ ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಯ ನೇತೃತ್ವದಲ್ಲಿ ಉಡುಪಿ ಟ್ಯಾಕ್ಸ್ ಬಾರ್ ಅಸೋಸಿಯೇಶನ್, ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಉಡುಪಿ ಬ್ರಾಂಚ್ (ಎಸ್ ಐ ರ್ ಸಿ),ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ, ಉಡುಪಿ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್, ಉಡುಪಿ ಡಿಸ್ಟಿಕ್ಟ್ ಕನ್ವೆನ್ಷನ್ ಹಾಲ್ ಅಸೋಸಿಯೇಶನ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಂಡ್ ಆರ್ಕಿಟೆಕ್ಟ್ಸ್,ಉಡುಪಿ, ಉಡುಪಿ ಹೋಟೆಲ್ ಓನರ್ಸ್ ಅಸೋಸಿಯೇಶನ್ , ಉಡುಪಿ ಸಿವಿಲ್ ಇಂಜಿನಿ ಯರ್ಸ್ ಅಸೋಸಿಯೇಶನ್ ಒಟ್ಟಾಗಿ  ಪ್ರಾಯೋಜಿಸುತ್ತಿರುವ ಕಾರ್ಯಕ್ರಮ.




29-8-2025 ರಂದು 3ಗಂಟೆಯಿಂದ 6 ಗಂಟೆಯ ವರಗೆ ಕಿದಿಯೂರ್ ಹೋಟೆಲ್ ನ ಅನಂತ ಶಯನ ಹಾಲ್ ನಲ್ಲಿ ಜಿ ಎಸ್ ಟಿ ಸೊಲ್ಯೂಷನ್ಸ್ G S T solutios ಎಂಬ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ​.  ಈ ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆಗೆ ಸಂಬಂಧ ಪಟ್ಟ ನೇರ ಪ್ರಶೆಗಳನ್ನು ಇಲಾಖೆ ಯ ಅಧಿಕಾರಿಗಳಿಗೆ ಕೇಳಿ ಉತ್ತರ ಪಡೆಯುವ ಹಾಗೂ ರಾಜ್ಯ/ರಾಷ್ಟ್ರ ಮಟ್ಟದಲ್ಲಿ ಪರಿಹಾರವಾಗಬಲ್ಲ ವಿಚಾರಗಳ ಮನವಿಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವ  ಅವಕಾಶ ಇದೆ.



ಈ ಕಾರ್ಯಕ್ರಮದಲ್ಲಿ ತಜ್ಞರ ಸಮಿತಿಯಲ್ಲಿ ಹೊಳೆಯಪ್ಪ ಡೆಪ್ಯುಟಿ ಕಮಿಷನರ್, ಉಡುಪಿ,​ ಹೇಮಲತ ಡೆಪ್ಯುಟಿ ಕಮಿಷನರ್ ಮಂಗಳೂರು,ಡಿಪಾರ್ಟಮೆಂಟ್ ಆಫ್ ಕಮರ್ಷಿಯಲ್ ಟ್ಯಾಕ್ಸ್, ಉಡುಪಿ ಟ್ಯಾಕ್ಸ್ ಬಾರ್ ಅಸೋಸಿಯೇಶನ್ ನ ಅಧ್ಯಕ್ಷರಾದ Rtn ಬಿ ಎಂ ಭಟ್,  ಉಡುಪಿ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ಆಡಿಟರ್ ಆದ CA ಸುರೇಂದ್ರ ನಾಯಕ್, ಖ್ಯಾತ ಟ್ಯಾಕ್ಸ್ ಕನ್ಸಲ್ಟೆಂಟ್ ಶ್ರೀ ಪ್ರಸಾದ್ ಉಪಾಧ್ಯಾಯ, ಖ್ಯಾತ ಆಡಿಟರ್ ಆದ CA ಗಣೇಶ್ ವೈ , ಸಭಾಪತಿಗಳಾಗಿ ಶ್ರೀ ಕುಮಾರ ವಿ Jt ಕಮಿಷನರ್,  ಶ್ರೀ ಲಕ್ಷಾಪತಿ ನಾಯ್ಕ್, Jt ಕಮಿಷನರ್,  ಡಿಪಾರ್ಟಮೆಂಟ್ ಆಫ್ ಕಮರ್ಷಿಯಲ್ ಟ್ಯಾಕ್ಸ್, ಮಂಗಳೂರು ವಿಭಾಗ ಹಾಗೂ ಶ್ರೀ ಅಮ್ಮುಂಜೆ ಪ್ರಭಾಕರ್ ನಾಯಕ್, ಅಧ್ಯಕ್ಷರು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಇವರು, ಜೊತೆಗೆ ಎಲ್ಲಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಆಸಕ್ತ ವಾಣಿಜ್ಯ ಸಂಸ್ಥೆಗಳ ಮಾಲಕರು ಮತ್ತು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಸದಸ್ಯರು ಭಾಗವಹಿ ಸುತ್ತಾರೆ​. 



ಎಲ್ಲದಕ್ಕಿಂತ ಮಿಗಿಲಾಗಿ ಇಷ್ಟು ಸಂಖ್ಯೆಯಲ್ಲಿ ಸಂಘ ಸಂಸ್ಥೆಗಳು ಜೊತೆಯಾಗಿ ಪ್ರಾಯೋಜಿ ಸುತ್ತಿರುವುದು ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಬಹುತೇಕ ಅಧಿಕಾರಿಗಳು ಭಾಗವಹಿಸುತ್ತಿರುವುದು, ಸರಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ಅಂತರ ಕಡಿಮೆ ಮಾಡುವ ಪ್ರಮುಖ ಉದ್ದೇಶದ ಈತರದ ಕಾರ್ಯಕ್ರಮ ಉಡುಪಿ ಜಿಲ್ಲೆಯಲ್ಲೇ ಪ್ರಪ್ರಥಮಬಾರಿಗೆ ಆಯೋಜಿಸಲಾಗಿದೆ ಎಂದು ಈ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಯ ಗೌರವ ಕಾರ್ಯದರ್ಶಿ ಡಾll ವಿಜಯೇಂದ್ರ ವಸಂತ್ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು