BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಆಗಸ್ಟ್ 17, ಪಣಿಯಾಡಿ ಪ್ರಶಸ್ತಿ

ತುಳುನಾಡು, ತುಳುಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳ ಉನ್ನತಿಗಾಗಿ ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಉಡುಪಿಯ “ತುಳು ಕೂಟ (ರಿ)”, ತುಳುನಾಡಿನಲ್ಲಿ ತುಳು ಚಳುವಳಿಯನ್ನು ಪ್ರಾರಂಭಿಸಿದವರು, ತುಳು ಸಾಹಿತ್ಯವನ್ನು ಬೆಳೆಸಲು ಪ್ರೋತ್ಸಾಹ ನೀಡಿದವರು – ತುಳುನಾಡ್ ಪ್ರೆಸ್, ತುಳು ಸಾಹಿತ್ಯಮಾಲೆ, ತುಳು ಕಾದಂಬರಿ, ತುಳು ವ್ಯಾಕರಣ ರಚನೆ ಮೊದಲಾದ ಅನೇಕ ಕೆಲಸಗಳನ್ನು ಮಾಡಿದವರು, ಸ್ವದೇಶಿ ಚಳುವಳಿಯಲ್ಲಿ ಭಾಗವಹಿಸಿ – ತುಳುನಾಡ್ ಬ್ಯಾಂಕ್ ಹಾಗೂ ತುಳು ಚಳುವಳಿ ಪ್ರಾರಂಭಿಸಿದವರು, ದಕ್ಷಿಣ ಕನ್ನಡ ಜಿಲ್ಲೆಯನ್ನು ತುಳುನಾಡು ಅಂತ ಕರೀಬೇಕು. ಅಲ್ಲಿ ತುಳು ಭಾಷೆಯನ್ನು ಕಲಿಸುವ ಶಾಲೆ ಆರಂಭ ಆಗಬೇಕು ಹಾಗೂ , ತುಳು ಭಾಷೆಯಲ್ಲಿಯೇ ಪುಸ್ತಕಗಳನ್ನು ಪ್ರಕಟವಾಗಬೇಕು, ತುಳುವನ್ನು ಆಡಳಿತ ಭಾಷೆಯಾಗಿ ಪರಿಗಣಿಸಬೇಕು ಎಂದು 1923 ರಲ್ಲೇ ಕನಸ ಕಟ್ಟಿದವರು – ಪಣಿಯಾಡಿ ಶ್ರೀನಿವಾಸ ಉಪಾಧ್ಯಾಯರು.

ಉಡುಪಿಯ ತುಳು ಕೂಟವು ಕಳೆದ 30 ವರ್ಷಗಳಿಂದ ತುಳು ಕಾದಂಬರಿ ಸ್ಪರ್ಧೆಗಳನ್ನು ನಡೆಸಿ, ಅದರಲ್ಲಿ ಶ್ರೇಷ್ಠ ಸ್ಥಾನ ಪಡೆದವರಿಗೆ “ಪಣಿಯಾಡಿ ಪ್ರಶಸ್ತಿ” ನೀಡುವ ಮೂಲಕ ಎಸ್. ಯು. ಪಣಿಯಾಡಿ ಅವರ ಸ್ಮರಣೆಯನ್ನು ಶಾಶ್ವತಗೊಳಿಸಿದೆ. ಈ ಮೂಲಕ ಅವರು ಮಾಡಿದ ಕೆಲಸವನ್ನು ನೆನಪಿಸಿ ಇಂದಿನ ಹಾಗೂ ಮುಂದಿನ ಜನಾಂಗದ ಅರಿವಿಗೆ ತರುವ ಮಹತ್ವದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ.

ಈ ಬಾರಿ ಮೂವತ್ತನೇ ವರ್ಷದ ವಿಶ್ವಪ್ರಭಾ ಪ್ರಾಯೋಜಿತ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ 17, ಭಾನುವಾರ ಸಂಜೆ 4 ಗಂಟೆಗೆ ಉಡುಪಿ ಕಿಡಿಯೂರು ಹೋಟೆಲ್‌ನ ಪವನ್ ರೂಫ್ ಟಾಪ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತುಳು ಕೂಟದ ಅಧ್ಯಕ್ಷರಾದ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತದೆ. ನಮ್ಮ ಕೊಡವೂರು ಮೂಲದ, ಪ್ರಸ್ತುತ ಮುಂಬೈನಲ್ಲಿ ವಾಸಿಸುವ ಶ್ರೀಮತಿ ಶಾರದಾ ಎ. ಅಂಚನ್ ಅವರ "ಅಕೇರಿದ ಎಕ್" ಕಾದಂಬರಿಗಾಗಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪುಸ್ತಕ ಪರಿಚಯವನ್ನು ಶ್ರೀಮತಿ ಸುಲೋಚನಾ ಜನಾರ್ಧನ್ (ಪಚ್ಚಿನಡ್ಕ) ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ –

- ಉದ್ಯಮಿ ಮತ್ತು ತುಳು ಕೂಟ ಭದ್ರಾವತಿ ಗೌರವಾಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ

- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಡುಪಿ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ

- ಶಿವ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್‌ನ ಉದ್ಯಮಿ ಶ್ರೀ ಪ್ರಭಾಕರ್ ಪೂಜಾರಿ

- ಉಡುಪಿ ವಿಶ್ವನಾಥ್ ಶೆಣೈ – ಹಾಜರಿರುವರು.

ಇದೆ ಸಂದರ್ಭದಲ್ಲಿ, SSLC ಪರೀಕ್ಷೆಯಲ್ಲಿ ತುಳು ಪಾಠದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!