ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಉಡುಪಿ ಕನ್ನರ್ಪಾಡಿಯ ಶ್ರೀದೇವಿ ಸಭಾ ಭವನದಲ್ಲಿ "ಆಟಿಡೊಂಜಿ ವಿಪ್ರಕೂಟ" ಕಾರ್ಯಕ್ರಮ ನಡೆಯಿತು.
ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣದಿಂದ ಆರಂಭವಾಗಿ ಸಭಾ ಕಾರ್ಯಕ್ರಮದಲ್ಲಿ - ಸಂಘ ಟನೆ ಮತ್ತು ಆಟಿ ಮಾಸದ ಬಗ್ಗೆ ವಿಶೇಷ ಮಾಹಿತಿಯನ್ನು ವಿದ್ವಾನ್ ಹೆರ್ಗ ಹರಿದಾಸ ಭಟ್ ರವರು ನೀಡಿದರು.
ಮುಖ್ಯ ಅತಿಥಿಗಳಾಗಿ ಶರತ್ ಕೆ ರಾವ್ -ಮಾಹೆ, ಉಡುಪಿಯ ನಿಕಟಪೂರ್ವ ಶಾಸಕ ಕೆ ರಘುಪತಿ ಭಟ್, ಶ್ರೀದೇವಿ ಸಭಾಭವನದ ಮಾಲಕ ರಮೇಶ್ ಬೀಡು, ನಗರಸಭಾ ಸದಸ್ಯ ಕೃಷ್ಣರಾವ್ ಕೊಡಂಚ, ಹಾಗೂ ಖ್ಯಾತ ಚಲನಚಿತ್ರ ನಟಿ , ರಂಗಿತರಂಗ ಖ್ಯಾತಿಯ ರಾಧಿಕಾ ನಾರಾಯಣ ಹಾಗೂ ಹಲ ವಾರು ಗಣ್ಯರು ಉಪಸ್ಥಿತರಿದ್ದರು.
ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ಕೆ ಅಧ್ಯಕ್ಷತೆಯಲ್ಲಿ ಕಾರ್ಯ ಕ್ರಮವು ನಡೆಯಿತು .
ಪ್ರಧಾನ ಕಾರ್ಯದರ್ಶಿಗಳಾದ ಕೆ. ದುರ್ಗಾಪ್ರಸಾದ್ ಭಾರ್ಗವ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಸಂಯೋ ಜಿಸಿದವರಿಗೆ, ವಿವಿಧ ಕಾರ್ಯ ಕ್ಷೇತ್ರದಲ್ಲಿ ಸಾಧನೆ ಗೈದ ಹಲವಾರು ಸಾಧಕರನ್ನು ಅಭಿನಂದಿಸ ಲಾಯಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಟಿ ಮಾಸದ ವಿಶೇಷ ಖಾದ್ಯಗಳ ಸಹ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಉಡುಪಿ ತಾಲೂಕಿನ ಸುಮಾರು 26 ವಿಪ್ರ ವಲಯಗಳು ಮತ್ತು 7 ವಿವಿಧ ಬ್ರಾಹ್ಮಣ ಸಂಘ ಗಳ ಸುಮಾರು ಒಂದು ಸಾವಿರ ಜನರು ಸೇರಿದ್ದರು. ಕೋಶಾಧಿಕಾರಿ ಹಯವದನ ಭಟ್ ಧನ್ಯವಾದ ವಿತ್ತರು.
0 ಕಾಮೆಂಟ್ಗಳು