ಉಡುಪಿ: ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಎಲ್ ಸಂತೋಷ್ ಅವರ ಅವಹೇಳನ ಪ್ರಕರಣದ ಸಂಬಂಧ ಸೌಜನ್ಯ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿ ದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ನಿನ್ನೆಯಷ್ಟೇ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದ್ವೇಷ ಭಾಷಣದ ಪ್ರಕರಣ ದಾಖಲಾಗಿತ್ತು.
ಬಿಜೆಪಿ ಬಿ ಎಲ್ ಸಂತೋಷ್ ವಿರುದ್ಧ ತಿಮರೋಡಿ ಮಾತನಾಡಿದ್ದು ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಬ್ರಹ್ಮಾವರ ಪೊಲೀಸರು ತಿಮರೋಡಿ ಯನ್ನು ಬಂಧಿಸಿ ಕರೆತರುತ್ತಿದ್ದಾರೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.
0 ಕಾಮೆಂಟ್ಗಳು