ಬ್ರಹ್ಮಾವರ ತಾಲ್ಲೂಕು ಕೊಕ್ಕರ್ಣೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚುಚ್ಚಿ ಹತ್ಯೆಗೈಯಲು ಯತ್ನಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಯುವತಿಯನ್ನು ಕೊಕ್ಕರ್ಣೆ ಚೆಗೆರಿಬೆಟ್ಟು ನಿವಾಸಿ ರಕ್ಷಿತಾ (20) ಎಂದು ಗುರುತಿಸಲಾಗಿದೆ. ಯುವತಿ ಮಣಿಪಾಲದಲ್ಲಿ ಕೆಲಸಕ್ಕೆ ಹೋಗಲೆಂದು ಮನೆಯಿಂದ ಬರುವಾಗ ಕಾರ್ತಿಕ್ ಪೂಜಾರಿ ಎನ್ನುವಾತ ಏಕಾ ಏಕಿ ಬೈಕಿನಲ್ಲಿ ಬಂದು ನೇರವಾಗಿ ಚಾಕುವಿನಿಂದ ಚುಚ್ಚಿದ್ದು ಯುವತಿಗೆ ತೀವ್ರ ರಕ್ತ ಸ್ರಾವವಾಗಿದ್ದು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇವತ್ತು ಯುವತಿಯ ಹುಟ್ಟುಹಬ್ಬವಾಗಿದ್ದು ಹುಟ್ಟಿದ ದಿನವೇ ಯುವತಿಯನ್ನು ಕೊಲೆಗೈಯುವ ಉದ್ದೇಶದಿಂದ ಯುವತಿಗೆ ಚಾಕು ಚುಚ್ಚಿ ಯುವಕ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು ಯುವತಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

0 ಕಾಮೆಂಟ್ಗಳು