Header Ads Widget

​ಹೃದ್ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ~ ಸಂಸದ ಕೋಟ ಶ್ರೀನಿವಾಸ ಪೂಜಾರಿ

                                 

ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ

ಉಡುಪಿ: ಯಾವುದೇ ​ಮುನ್ಸೂಚನೆ ನೀಡದೆ ನೇರವಾಗಿ ಸಾವಿನ ಬಾಗಿಲಿಗೆ ಕೊಂಡೊಯ್ಯುವ ಏಕೈಕ ರೋಗ ಹೃದ್ರೋಗ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಆದರ್ಶ ಅಸ್ಪತ್ರೆಯಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಮತ್ತು ಉಚಿತ ಹೃದ್ರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸಣ್ಣ ಮಕ್ಕಳೂ ಕ್ಯಾನ್ಸರ್​ ಪೀಡಿತರಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆರೋಗ್ಯ ವ್ಯವಸ್ಥೆಯೇ ಅಪಾಯಕ್ಕೆ ಸಿಲುಕುವ ಸಂಭವವಿದೆ. ಹೀಗಾಗಿ ದೇಶದ ಒಟ್ಟು ವ್ಯವಸ್ಥೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.


ಜಿಲ್ಲಾ ಸರ್ಜನ್​ ಡಾ. ಎಚ್​. ಅಶೋಕ್​ ಮಾತನಾಡಿದರು. ಡಿಎಚ್​ಒ ಡಾ. ಬಸವರಾಜ್​ ಹುಬ್ಬಳ್ಳಿ, ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್​, ತಜ್ಞ ವೈದ್ಯರಾದ ಡಾ. ಶ್ರೀಕಾಂತ್​, ಡಾ. ಸುಹಾಸ್​ ಜಿ.ಸಿ., ಬಿಜೆಪಿ ಮುಖಂಡ ಉದಯ್​ ಕುಮಾರ್​ ಶೆಟ್ಟಿ, ಡಾಜಸ್ಪ್ರೀತ್ ಸಿಂಗ್, ಡಾ​. ಮೋಹನ ದಾಸ್ ಶೆಟ್ಟಿ ಉಪಸ್ಥಿತರಿದ್ದರು. ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್​. ಚಂದ್ರಶೇಖರ್​ ಸ್ವಾಗತಿಸಿದರು. ಡಯಟೀಶಿಯನ್​ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ವ್ಯವಸ್ಥಾಪಕ ಪ್ರಕಾಶ್​ ಡಿ.ಕೆ. ವಂದಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು