BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಿ. ರಮಾನಂದ ಭಟ್ ಪುನರಾಯ್ಕೆ

ವಿವೇಕ ವಿದ್ಯಾಸಂಸ್ಥೆಗಳ ಮಹಾತ್ಮಾ ಗಾಂಧಿ ಸ್ಮಾರಕ ಭವನದಲ್ಲಿ ನಡೆದ ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ನಿವೃತ್ತರಾದ ಸಂಸ್ಕೃತ ಉಪನ್ಯಾಸಕ ಸಿ.ಮಂಜುನಾಥ ಉಪಾಧ್ಯ,ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಜಗದೀಶ ಹೊಳ್ಳ ಮತ್ತು ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಿವೇಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡುತ್ತಿರುವ ಸಂಸ್ಥೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾಧಕರನ್ನು ಹಾಗೂ ದ್ವಿತೀಯ ಪಿ.ಯು.ಸಿ.ಯ ಮೂರೂ ವಿಭಾಗಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರನ್ನು ಅವರ ಪೋಷಕರ ಸಮ್ಮುಖದಲ್ಲಿ ನಗದು ಬಹುಮಾನ ನೀಡಿ ಪುರಸ್ಕಾರಿಸಲಾಯಿತು. 

ಸಂಘದ ಅಧ್ಯಕ್ಷ ಸಿ.ರಮಾನಂದ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷ ಜಗದೀಶ ನಾವಡ ನಿವೃತ್ತರ ಕುರಿತು ಅಭಿನಂದನೆಯ ನುಡಿಗಳನ್ನಾಡಿದರು. 

ಶೈಲಜಾ ಉರಾಳರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಪ್ರೊ. ಎಚ್.ವಿ. ಸೋಮಯಾಜಿ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ಸುಧಾಕರ್ ವಾರ್ಷಿಕ ವರದಿಯನ್ನು, ಕೋಶಾಧಿಕಾರಿ ಪಿ. ಪ್ರಕಾಶ್ ಹೇರ್ಳೆ ಆಯ-ವ್ಯಯ ಪತ್ರವನ್ನು ಮಂಡಿಸಿದರು.ಪಿ.ಮಂಜುನಾಥ ಉಪಾಧ್ಯ ಪ್ರತಿಭಾ ಪುರಸ್ಕಾರ ನಡೆಸಿ ಕೊಟ್ಟರು.ನಿವೃತ್ತರಾಗುವ ಸದಸ್ಯರ ಸ್ಥಾನದಲ್ಲಿ ಹೊಸ ಸದಸ್ಯರನ್ನು ಆಯ್ಕೆ ಮಾಡಲಾಯಿತು.

 ಜಿ.ಸಂಜೀವ ಸಂಯೋಜಿಸಿದ ಕಾರ್ಯಕ್ರಮದಲ್ಲಿ ಗೌರವ ಉಪಾಧ್ಯಕ್ಷರಾದ ವೆಂಕಟೇಶ ಉಡುಪ, ಪ್ರೇಮಾನಂದ್ ಮತ್ತು ಪ್ರೀತಿ ರೇಖಾ ಉಪಸ್ಥಿತರಿದ್ದರು. ಶ್ರೀಪತಿ ಹೇರ್ಳೆ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ವೈ.ಸದಾರಾಮ ಹೇರ್ಳೆ ಧನ್ಯವಾದ ಸಮರ್ಪಿಸಿದರು.

ಮಹಾಸಭೆಯ ನಂತರ ನಡೆದ ಮೊದಲ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಿ.ರಮಾನಂದ ಭಟ್ ಇವರನ್ನು ಅಧ್ಯಕ್ಷರಾಗಿ ಸರ್ವಾನುಮತದಿಂದ ಆರಿಸಲಾಯಿತು. ಕೋಶಾಧಿಕಾರಿಯಾಗಿ ಪಂಜು ಪೂಜಾರಿಯವರು ಆಯ್ಕೆಯಾದರು.ಉಳಿದಂತೆ ಕಳೆದ ಸಾಲಿನ ಪದಾಧಿಕಾರಿಗಳನ್ನು ಮುಂದುವರಿಸಲು ತೀರ್ಮಾನಿಸಲಾಯಿತು. 

ತನ್ನ ಆಯ್ಕೆಗೆ ಕೃತಜ್ಞತೆ ಸಲ್ಲಿಸಿದ ಅಧ್ಯಕ್ಷರು ತಂಡಸ್ಫೂರ್ತಿಯಿಂದ ಸಂಘಟನೆಯನ್ನು ಬಲಪಡಿಸಲು ಸರ್ವರ ಸಹಕಾರ ಕೋರಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!