BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಜನಾರ್ದನ್ ಕೊಡವೂರು ಮಡಿಲಿಗೆ 'ಮಹರ್ಷಿ ವಾಲ್ಮೀಕಿ ಸಮ್ಮಾನ್ - 2025'

ಕನ್ನಡದ ಮೊದಲ ಮಹಾಕಾವ್ಯ ರಾಮಾಯಣದ ಕರ್ತೃ, ಪೌರಾಣಿಕ ಕವಿ, ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಕ್ಟೋಬರ್ 07 ರಂದು ಆಚರಿಸುತ್ತೇವೆ. ಸರ್ಕಾರವೂ ಕೂಡಾ ಸಕಲ ಗೌರವಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುತ್ತದೆ. ಮಹರ್ಷಿ ವಾಲ್ಮೀಕಿ ಅವರು ನಮ್ಮ ಹಿಂದೂ ಸಮಾಜಕ್ಕೆ ಭಕ್ತಿ ಭಾವನಾತ್ಮಕ ಗ್ರಂಥವಾದ ರಾಮಾಯಣವನ್ನು ನಮಗೆ ಕೊಟ್ಟವರು, ರತ್ನಾಕರನೆಂಬ ಒಬ್ಬ ಬೇಡ, ಕ್ರೂರ ವ್ಯಕ್ತಿ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತಿತಗೊಂಡ ಅಧ್ಬುತ ಕಥೆ ತಿಳಿದಿರು ವಂತದ್ದು, ಹಿಂದೂಗಳಾದ ನಾವೆಲ್ಲ ಮಹರ್ಷಿ ವಾಲ್ಮೀಕಿ ಅವರನ್ನು ಭಕ್ತಿಯಿಂದ ಪೂಜಿಸಬೇಕು, ಆರಾಧಿಸಬೇಕು.

ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ನಮ್ಮ ಸಂಘದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಿ ಆಚರಿಸುತ್ತಿದ್ದೇವೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾನ್ಯ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ಆಗಮಿಸಲಿದ್ದು, ಕನ್ನಡ ನಾಡು - ನುಡಿ ಸಂಸ್ಕೃತಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ - 2025 ನ್ನು ನೀಡಿ ಗೌರವಿಸಲಿದ್ದೇವೆ.

ಸಂಘಟಕ ಜಯಕರ ಶೆಟ್ಟಿ ಇಂದ್ರಾಳಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಲಿದ್ದು, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಭಿನಂದನಾ ಮಾತುಗಳನ್ನಾಡಲಿದ್ದಾರೆ ಖ್ಯಾತ ಛಾಯಾಗ್ರಾಹಕ ರಾದ ಆಸ್ಟ್ರೋ ಮೋಹನ್ ರವರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಅಕ್ಟೋಬರ್ 07 ರಂದು, ಜಗನ್ನಾಥ ಸಭಾ ಭವನದಲ್ಲಿ ಸಂಜೆ 4.30 ಗಂಟೆಗೆ ಆಯೋಜಿಸಲಾಗಿದೆ. 


ಜನಾರ್ದನ್ ಕೊಡವೂರು ಪರಿಚಯ : 

ಜನಾರ್ದನ್ ಕೊಡವೂರು ಇವರು ಛಾಯಾಗ್ರಹಣ ಕ್ಷೇತ್ರ ಹಾಗು ಪತ್ರಿಕಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ರೋಟರ್ಯಾಕ್ಟ್, ರೋಟರಿಯಂತಹ ಸಾಮಾಜಿಕ ಸೇವೆಯ ಸಂಘಟನೆಯಲ್ಲಿ ಗುರುತಿಸಿಕೊಂಡವರು. ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಶಿಯೇಷನ್ ಉಡುಪಿ ವಲಯದ ಅಧ್ಯಕ್ಷರಾಗಿ ತಮ್ಮ ಅಧಿಕಾರಾವಧಿಯಲ್ಲಿ ಸತತ ಎರಡು ವರ್ಷ ಉತ್ತಮ ವಲಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ತಮ್ಮ ಕೆಮರಾದಲ್ಲಿ ಸೆರೆಹಿಡಿದು ಆಯೋಜಿಸಿದ್ದ “ಯತಿಗಳೊಂದಿಗೆ ಒಂದು ದಿನ”, “ಆಡಿಸಿದರೆ ಜಗದೋದ್ಧಾರನ” ಛಾಯಾಂಕನ ಕಾಲದೊಂದಿಗೆ ಓಟ” { Race with Time } ಎಂಬ ಕಂಬಳದ ಛಾಯಾಚಿತ್ರಗಳ ಪ್ರದರ್ಶನ ಜನಮೆಚ್ಚುಗೆ ಪಡೆದಿದೆ.

ಸುಮಾರು 20ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಜನಾರ್ದನ್ ಪತ್ರಿಕಾ ಛಾಯಾಗ್ರಾಹಕ ನಾಗಿ ದುಡಿಯುತ್ತಿ ದ್ದಾರೆ. ಕೊಡವೂರು ಶoಕರನಾರಾಯಣ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಇವರ ಮಾಲಕತ್ವ ದ karavalixpress.in ಎಂಬ ವೆಬ್ ಸುದ್ಧಿಜಾಲ ಯಶಸ್ವಿಯಗಿ ಮುನ್ನುಗ್ಗುತ್ತಿದೆ. 2021ಸಾಲಿನ ಪ್ರತಿಷ್ಟಿತ ಪಿಸಿಆರ್ ಅವಾರ್ಡ್ ಈ ವೆಬ್ಜಾಲಕ್ಕೆ ಲಭಿಸಿದೆ.

ಛಾಯಾಗ್ರಹಣ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ ಹಾಗು ರಾಷ್ಠೃಮಟ್ಟದಲ್ಲಿ ಇವರಿಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಪತ್ರಿಕೋದ್ಯಮ ಹಾಗು ಛಾಯಾಚಿತ್ರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ 2013 ನೇ ಸಾಲಿನ ‘ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’, ರಾಜ್ಯಮಟ್ಟದ ಯಶೋಮಾಧ್ಯಮ ಅವಾರ್ಡ್, ಶ್ರೀಕೃಷ್ಣ ಮಠ ಕೊಡಮಾಡಿದ ಮಾಧ್ಯಮ ರತ್ನ ಪ್ರಶಸ್ತಿ, “ಶ್ರೀಕೃಷ್ಣಾನುಗ್ರಹ” ಪ್ರಶಸ್ತಿ, ದೆಹಲಿ ಕನ್ನಡಿಗ ಪತ್ರಿಕೆ ಆಯೋಜಿಸಿದ್ದ 31ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದಲ್ಲಿ ದೆಹಲಿಯಲ್ಲಿ ಪುರಸ್ಕಾರ, “ಉಪಾಧ್ಯಾಯ ಸಮ್ಮಾನ್” ರಾಜ್ಯ ಮಟ್ಟದ ಪ್ರಶಸ್ತಿ, ಅಲ್ಲದೆ ಹಲವಾರು ಸಂಘ ಸಂಸ್ಥೆಗಳು ಗುರುತಿಸಿ ಅಭಿನಂದಿಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪಡೆದಿರುತ್ತಾರೆ. ಪ್ರಸ್ತುತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಜಿಲ್ಲಾ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!