Header Ads Widget

ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ನಿಧನ

ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51)  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು