ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ (03.03.2026) ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿಪಂಚಾಯಿತಿಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಪೊಲೀಸ್ ಮೂಲಗಳು ತಿಳಿಸಿವೆ.

0 ಕಾಮೆಂಟ್ಗಳು