ಉಡುಪಿಯ ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ!

ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಉಡುಪಿ ನಗರ ಠಾಣೆಯ ಎಎಸ್‌ಐ ಶ್ರೀ ಚಂದ್ರ ಶೆಟ್ಟಿ ಇವರು ಪಡೆದುಕೊಂಡಿರುತ್ತಾರೆ. 

ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಸಂತೋಷ್‌ ಶೆಟ್ಟಿ, ಎಎಚ್‌ಸಿ 82, ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಇವರು ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸಲ್ಲಿಸಿದ ವಿಶಿಷ್ಠ ಸೇವೆಗಾಗಿ ಈ ಬಾರಿ ಚಿನ್ನದ ಪದಕವನ್ನ ಪಡೆದಿರುತ್ತಾರೆ. 

ನಕ್ಸಲ್‌ ನಿಗ್ರಹ ಪಡೆ, ಕಾರ್ಕಳ ಇಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಮಂಜುನಾಥ ದೇವರಮನೆ, ಆರ್.ಎಸ್.ಐ ಇವರು ನಕ್ಸಲ್‌ ನಿಗ್ರಹ ಪಡೆಯಲ್ಲಿ ನಿರ್ವಹಿಸದ ಅತ್ಯುನ್ನತ ಸೇವೆಗಾಗಿ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿರುತ್ತಾರೆ. 

ಪದಕ ಪುರಸ್ಕ್ರತರನ್ನು ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್‌ ನಿಗ್ರಹ ಪಡೆಯ ಪ್ರಭಾರ ಪೊಲೀಸ್‌ ಅಧೀಕ್ಷಕರಾದ ಶ್ರೀ ಹರಿರಾಮ್‌ ಶಂಕರ್ ಐಪಿಎಸ್‌ ಇವರು ಅಭಿನಂದಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು