ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ: ತ್ವರಿತ ಅನುಷ್ಠಾನಕ್ಕೆ ಸಂಸದ ಕೋಟ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನ ಸಂಸದ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಎದುರಾಗುತ್ತಿರುವ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸದರು ಅಧಿಕಾರಿಗಳಿಗೆ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಹಾಗೂ ಯಾವುದೇ ರೀತಿಯ ವಿಳಂಬವಾಗದoತೆ ಕ್ರಮಕೈಗೊಳ್ಳಲು ತಿಳಿಸಿದರು. 

ವಿಶೇಷವಾಗಿ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಬಾಕಿ ಇರುವ ಕಾಮಗಾರಿಗಳಿಗೆ ತಕ್ಷಣವೇ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಅನುಷ್ಠಾನ ಮಾಡುವಂತೆ ನಿರ್ದೇಶಿಸಿದರು. 

ಸಭೆಯಲ್ಲಿ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಅಬೀದ್ ಗದ್ಯಾಳ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಶ್ರೀ ಅರುಣ್ ಕುಮಾರ್, ಪಂಚಾಯತ್ ರಾಜ್ ಇಂಜಿನಿಯರಿoಗ್ ವಿಭಾಗದ ಶ್ರೀನಾಥ್ ಹಾಗೂ ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು