ಯಕ್ಷಶಿಕ್ಷಣ ಸನಿವಾಸ ಶಿಬಿರ – 2026

ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ದಿನಾಂಕ ೦೮.೦೪.೨೦೨೬ ರಿಂದ ೧೪.೦೪.೨೦೨೬ರ ವರೆಗೆ ಒಂದುವಾರದ ‘ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರ – ೨೦೨೬’ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಲಿದ್ದು, ಇದರ ಉದ್ಘಾಟನಾ ಸಮಾರಂಭವು ೦೮.೦೪.೨೦೨೬ರಂದು ಪೂರ್ವಾಹ್ನ ೧೦.೦೦ ಗಂಟೆಗೆ ಜರಗಲಿದೆ. ಗೀತಾನಂದ ಫೌಂಡೇಶನ್ ಅಧ್ಯಕ್ಷ ಶ್ರೀ ಆನಂದ ಸಿ. ಕುಂದರ್ ಉದ್ಘಾಟಿಸಲಿರುವರು. ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಎ. ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಶ್ರೀ ಕಿರಣ್‌ಕುಮಾರ್ ಕೊಡ್ಗಿ ಶುಭಾಶಂಸನೆಗೈಯಲಿರುವರು. ಕುಂದಾಪುರದ ಮನೋವೈದ್ಯ ಡಾ. ಕೆ. ಎಸ್. ಕಾರಂತ್, ಹಿರಿಯಡಕದ ಉದ್ಯಮಿ ಶ್ರೀ ಪಿ. ನಟರಾಜ ಹೆಗ್ಡೆ, ಬ್ರಹ್ಮಾವರದ ಸಾಮಾಜಿಕ ಕಾರ್ಯಕರ್ತ ಶ್ರೀ ಸುಧೀರ್ ಕುಮಾರ್ ಶೆಟ್ಟಿ, ಮಣಿಪಾಲ ಪಶುವೈದ್ಯಾಧಿಕಾರಿ ಡಾ. ಪ್ರಶಾಂತ್ ಶೆಟ್ಟಿ ಅಭ್ಯಾಗತರಾಗಿ ಭಾಗವಹಿಸಲಿರುವರು. ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ಶಿಬಿರ ನಡೆಯಲಿದ್ದು, ಯಕ್ಷಶಿಕ್ಷಣ ಯೋಜನೆಯಲ್ಲಿ ಪಾಲ್ಗೊಂಡ ೯೪ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂಬುದಾಗಿ ಯಕ್ಷಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು