ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ನಾಗದೇವರ ಪ್ರತಿಷ್ಠ ವರ್ಧಂತಿ ಮಹೋತ್ಸವ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿರುವ ಶ್ರೀ ನಾಗರಾಜ ನಾಗರಾಣಿಯರ ಸನ್ನಿಧಾನದ ವಾರ್ಷಿಕ ಪ್ರತಿಷ್ಠ ವರ್ಧಂತಿ ಮಹೋತ್ಸವ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀ ಗಣೇಶ್ ಸರಳಾಯ ಅವರ ನೇತೃತ್ವದಲ್ಲಿ ನೆರವೇರಿತು.

ಶ್ರೀ ಗಾಯತ್ರಿ ಧ್ಯಾನ ಪೀಠದಲ್ಲಿರುವ ಶ್ರೀ ಪಂಚಮುಖಿ ಗಾಯತ್ರಿ ದೇವಿಗೆ ಪಂಚವಿoಶತೆ ಕಲಶ ಅಭಿಷೇಕ ವಲ್ಲಿ ದೇವಯಾನಿ ಸಹಿತ ಆರೂಢನಾದ ಷಟ್ ಶಿರ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಪಂಚವಿ oಶತೆ ಕಳಶಾಭಿಷೇಕ  ಪವಮಾನ ಸೂಕ್ತ ಯಾಗ ಶ್ರೀ ಕಾಮದೇನು ಸಹಿತ ಕಪಿಲ ಮಹರ್ಷಿಗಳ ಸನ್ನಿಧಾನ ಹಾಗೂ ಪ್ರಸನ್ನಕ್ಷಿಯ ಸನ್ನಿಧಾನದಲ್ಲಿ ದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶಾಭಿಷೇಕ  ನಾಗದೇವರ ಸನ್ನಿಧಾನದಲ್ಲಿ ಪಂಚವಂಶತಿ ಕಲಶಾಭಿಷೇಕ ಪರಿವಾರ ಪೂಜೆ ಆಶ್ಲೇಷ ಬಲಿದಾನ ವಟು ಆರಾಧನೆ ಬ್ರಾಹ್ಮಣ ಆರಾಧನೆ ಮಹಾಪೂಜೆ ಮಹಾ ಅನ್ನಸಂತರ್ಪಣೆ  ಹಾಗೂ ಭ್ರಮರಿ ನಾಟ್ಯಾಲಯದ ವಿದ್ವಾನ್ ಭವಾನಿ ಶಂಕರ್ ಅವರ ಶಿಷ್ಯರಿಂದ ನೃತ್ಯ ಸೇವೆ ನೆರವೇರಿತು ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.

ಬಾಕ್ಸ್ ನ್ಯೂಸ್ ಇಂದು ಪಂಚವಿ oಶತೆ ದ್ರವ್ಯ ಮೀಳಿ ತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕ ಬ್ರಹ್ಮ ಕಲಶೋತ್ಸವ ಇಂದು ಶ್ರೀಚಕ್ರ ಪೀಠ ಸುರಪೂಜಿತೆಯಾದ ಶ್ರೀ ದುರ್ಗಾ ಆದಿಶಕ್ತಿ ದೇವಿ ಬೆಳಗ್ಗಿನ ಸುಮಹೂರ್ತದಲ್ಲಿ ಪಂಚ ವಿಂಷತಿ ದ್ರವ್ಯ ಮೀಳಿತ ಅಷ್ಟೋತ್ತರ ಶತ ಬ್ರಹ್ಮಕುಂಭ ಅಭಿಷೇಕ ವು ಕ್ಷೇತ್ರದ ಧರ್ಮದ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸರ್ವೇಶ ಮಂತ್ರಿಗಳ ನೇತೃತ್ವದಲ್ಲಿ ಹಾಗೂ ವೇದಮೂರ್ತಿ ವಿಕ್ಯಾತ್ ಭಟ್ ಅವರ ಉಸ್ತುವಾರಿಯಲ್ಲಿ  ನೆರವೇರಿತು.

ನಂತರ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಗಂಟೆ ಆರರಿಂದ ಬಲಿ ಉತ್ಸವ ಪಲ್ಲಕ್ಕಿ ಉತ್ಸವ ವಸಂತ ಪೂಜೆ ಅಷ್ಟಾವಧಾನ ಸೇವೆ ಪ್ರಸಾದ ವಿತರಣೆ ಪ್ರಸನ್ನ ಪೂಜೆ ಆರಾಧನಾ ರಂಗ ಪೂಜಾ ಮಹೋತ್ಸವ ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು