ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಸಭೆ; ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಸಭೆಯು ಶ್ರೀದೇವಿ ಸಭಾ ಭವನದಲ್ಲಿ ಇತ್ತೀಚಿಗೆ ನೆಡೆಯಿತು. ಸಂಘದ ಅಧ್ಯಕ್ಷ ಎಂ.ಎನ್. ರಾಜೇಂದ್ರ ನೇತೃತ್ವದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಸಂದೀಪ್ ಕುಮಾರ್, ಉಡುಪಿ ತಾಲ್ಲೂಕ್ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀಕಾಂತ್ ಉಪದ್ಯಾಯ ಸಮಾಜ ಸೇವೆಯಲ್ಲಿ ವಿಪ್ರ ಸಮಾಜದ ಸಾಧಕರಾದ ರಮೇಶ್ ರಾವ್ ಬೀಡು, ಖ್ಯಾತ ವೈದ್ಯರು ಶಿಕ್ಷಣ ತಜ್ಞರಾದ ಡಾ ಸೀತಾರಾಮ್ ಭಟ್, ಪ್ರತಿಭಾ ಪುರಸ್ಕಾರದಲ್ಲಿ ವಿಶೇಷ ಸಾಧನೆಗೈದ ಹರೀಶ್ ಭಟ್ ರವರನ್ನು ಶಾಲು ಹೊದಿಸಿ ಫಲ ಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ದಾಂಪತ್ಯ ಜೀವನದ ಸುವರ್ಣ ಮೊಹೋತ್ಸವದ ದಂಪತಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಮಹಿಳಾ ವಲಯದ ಅಧ್ಯಕ್ಷರಾದ ಡಾ ಉಷಾ ಚಡಗ, ವಿಜಯಲಕ್ಷ್ಮಿ ಕಿರಣ್, ಬೃಂದಾ ರಾಜೇಂದ್ರ, ಉಮಾ ಸುರೇಶ್, ಸುಧಾ ಶ್ರೀಕಾಂತ್, ಕೋಶಾಧಿಕಾರಿ ಶ್ರೀಕಾಂತ್ ಭಟ್ ವಿವಿಧ ಪದಾಧಿಕಾರಿಗಳು ನೂರಾರು ಸಮಾಜ ಬಾಂದವರು ಉಪಸ್ಥಿತರಿದ್ದರು ಅಧ್ಯಕ್ಷ ಎಂ.ಎನ್. ರಾಜೇಂದ್ರ ಸ್ವಾಗತಿಸಿ ಕಾರ್ಯದರ್ಶಿ ಮಂಚಿ ಸುರೇಶ್ ರಾವ್ ವಾರ್ಷಿಕ ವರದಿ ವಾಚಿಸಿದರು.

ಸುದರ್ಶನ ಆಚಾರ್ಯ ವಾರ್ಷಿಕ ಲೆಕ್ಕ ಪತ್ರ ಮಂಡಿಸಿ , ಸಂಯುಕ್ತ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರ ಕಿರಣ್ ಮಂಜನ ಬೈಲ್ ಕಾರ್ಯಕ್ರಮ ನಿರೊಪಿಸಿ, ವಂದಿಸಿದರು ಸಂಘದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ ನೆಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು