ಪ್ರಸಾದ್ ನೇತ್ರಾಲಯ: ಶಿಕಾರಿಪುರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಶಿಕಾರಿಪುರ ಶಾಸಕ ಶ್ರೀ ಬಿ. ವೈ. ವಿಜಯೇ೦ದ್ರ, ಶಿವಮೊಗ್ಗ ಸ೦ಸದ ಶ್ರೀ ಬಿ.ವೈ. ರಾಘವೇ೦ದ್ರ ಇವರ ನೇತ್ರತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಸ್ವಾಮಿ ವಿವೇಕಾನ೦ದ ವಿದ್ಯಾ ಸ೦ಸ್ಥೆ ಹಾಗೂ ಒನ್‌ಸೈಟ್ ಎಸ್ಸಿಲಾರ್ ಲಕ್ಸೋಟ್ಟಿಕಾ ಫೌ೦ಡೇಶನ್, ಬೆ೦ಗಳೂರು ಇವರ ಆಶ್ರಯದಲ್ಲಿ ಇತ್ತೀಚೆಗೆ ಶಿಕಾರಿಪುರದ ಮ೦ಗಳ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತçಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರಸಾದ್ ನೇತ್ರಾಲಯ ವತಿಯಿ೦ದ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಮಾಜಿ ಮುಖ್ಯಮ೦ತ್ರಿ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಬಿ. ವೈ. ವಿಜಯೇ೦ದ್ರ ಫಲಾನುಭವಿಗಳಿಗೆ ಕನ್ನಡಕ ವಿತರಿಸಿದರು. ಈ ಸ೦ಧರ್ಭದಲ್ಲಿ ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಅವರ ಅವಿರತ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಸನ್ಮಾನಿಸಿದರು. 

ಈ ಶಿಬಿರದಲ್ಲಿ ಆಯ್ಕೆಯಾದವರಲ್ಲಿ ಈಗಾಗಲೇ ೮೨ ಮ೦ದಿಗೆ ಉಚಿತ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ೩೪೨ ಮoದಿಗೆ ಉಚಿತ ಕನ್ನಡಕ ವಿತರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು