ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜ್ಞಾನ ಭಾರತಂ ಮಿಶನ್ ನ ಯೋಜನೆಯ ಹಿನ್ನೆಲೆಯಲ್ಲಿ ಈಗಾಗಲೇ ದೇಶದಾದ್ಯಂತ 1 ಕೋಟಿಗೂ ಅಧಿಕ ಸಂಖ್ಯೆಯ ಹಸ್ತಪ್ರತಿಗಳನ್ನು ಸರ್ವೇ ಮಾಡಲಾಗಿದೆ. ವಿವಿಧ ಭಾಷೆಗಳಲ್ಲಿರುವ ವಿವಿಧ ವಿಷಯಗಳ ಹಸ್ತಪ್ರತಿಗಳ ಲಿಪ್ಯಂತರ ಕಾರ್ಯಕ್ರಮ ಭಾರತ ಸರಕಾರದ ಅಧೀನದಲ್ಲಿರುವ ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ನವ ದೆಹಲಿ (CSU ) ಮತ್ತು ಕೇಂದ್ರೀಯ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್, ನವ ದೆಹಲಿ (CCRAS ) ಇವರ ಮಾರ್ಗದರ್ಶನ ಹಾಗೂ ಆರ್ಥಿಕ ಸಹಭಾಗಿತ್ವದಲ್ಲಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದಿಂದ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರ ಅನುಗ್ರಹದಿಂದ ಕರಾವಳಿ ಕರ್ನಾಟಕದ ಪ್ರದೇಶದಲ್ಲಿ ದೊರೆಯುವ ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರವನ್ನು ಗೀತಾ ಮಂದಿರದಲ್ಲಿರುವ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ಭಾರತ ಸರಕಾರದ ಆಯುಷ್ ಸಚಿವಾಲಯದ ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾದ ಪ್ರೋ. ವೈದ್ಯ ರಬಿನಾರಾಯಣ ಆಚಾರ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತೆಲಂಗಾಣದ ಹೈದ್ರಾಬಾದ್ ನಲ್ಲಿ ಇರುವ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪರಂಪರೆ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಡಾ ಜಿ ಪಿ ಪ್ರಸಾದ್, ನಿಟ್ಟೆ ವಿಶ್ವವಿದ್ಯಾಲಯದ IKS ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಕೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಶ್ರೀ ಪುತ್ತಿಗೆ ಮಠದ ಆಡಳಿತಾಧಿಕಾರಿಗಳು ಹಾಗೂ ದಿವಾನರೂ ಆದ ಶ್ರೀ ನಾಗರಾಜ ಆಚಾರ್ಯ , ಕೇಂದ್ರೀಯ ಆಯುರ್ವೇದೀಯ ಅನುಸಂಧಾನ ಸಂಸ್ಥಾನ, ಬೆಂಗಳೂರು ವಿಭಾಗ ಇದರ ಸಹಾಯಕ ನಿರ್ದೇಶಕರಾದ ಡಾ.ಮಹೇಶ್ವರ ಟಿ, ರಾಜಸ್ಥಾನದ ಎಂ ಎಸ್ ಪ್ರಾದೇಶಿಕ ಆಯುರ್ವೇದ ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿಗಳಾದ ಡಾ ವಿನೋದ್ ಕುಮಾರ್ ಲಾವಣಿಯಾ, ನವ ದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೆಂದ್ರ ( IGNC ) ಭಾಷಾ ವಿದ್ವಾಂಸರಾದ ಡಾ ಕೀರ್ತಿಕಾಂತ್ ಶರ್ಮಾ, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಡಾ .ಆರ್ ಎಲ್ ನಾರಾಯಣ ಸಿಂಹ, ಡಾ ದಿಲೀಪ್ ಕುಮಾರ್ ಕಾರ್, ಹಾಗೂ ಮತ್ತು , ಮತ್ತು ಉದ್ಯಾವರದ ಎಸ್ ಡಿ ಎಂ ಆಯುರ್ವೇದ ಮಹಾ ವಿದ್ಯಾಲಯದ ಉಪನ್ಯಾಸಕರಾದ ಡಾ ಮಹಾಲಕ್ಷ್ಮಿ ಎಂ ಎಸ್, ಡಾ ದೀಕ್ಷಿತಾ ಹೆಬ್ಬಾರ್, ಡಾ ಸುದರ್ಶನ್ ಹಾಗೂ ಶ್ರೀ ಪುತ್ತಿಗೆ ವಿದ್ಯಾಪೀಠದ ವಿದ್ವಾಂಸರಾದ ಡಾ ಸುನಿಲ್ ಆಚಾರ್ಯ, ಸುಗುಣ ಮಾಲಾ ಪತ್ರಿಕೆಯ ಸಂಪಾದಕರಾದ ವಿದ್ವಾನ್ ಮಹಿತೋಷ ಆಚಾರ್ಯ, ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ ಎಸ್ ಎ ಕೃಷ್ಣಯ್ಯ ಮುಂತಾದ ಪ್ರಸಿದ್ಧ ವಿದ್ವಾಂಸರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ವಿದ್ವಾನ್ ಗೋಪಾಲಾಚಾರ್ಯ ನಿರೂಪಿಸಿದರು.

0 ಕಾಮೆಂಟ್ಗಳು