ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ.
ಉಡುಪಿ ಸಂಘಟನೆಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ. ತದನಂತರ ನೂತನ ಜಿಲ್ಲಾ ಪದಾಧಿಕಾರಿಗಳಾಗಿ ಗೌರಧ್ಯಕ್ಷರಾಗಿ ಲಕ್ಷ್ಮಿಶ ಶೆಟ್ಟಿ. ಜಿಲ್ಲಾ ಉಪಾಧ್ಯಕ್ಷರಾಗಿ ಆನಂದ್ ಶೆಟ್ಟಿ ಹಾಗೂ ನಾಗರಾಜ್. ಜಿಲ್ಲಾ ಸಂಘಟನೆ ಕಾರ್ಯದರ್ಶಿಯಾಗಿ ಪ್ರಸಾದ್. ಜಿಲ್ಲಾ ಗೌರವ ಸಲಹೆಗಾರರಾಗಿ ಪ್ರಕಾಶ್ ದೇವಾಡಿಗ. ಜಿಲ್ಲಾ ಕಾರ್ಯದರ್ಶಿಯಾಗಿ ಸರ್ವೋತ್ತಮ್. ಜಿಲ್ಲಾ ಸಾಂಸ್ಕೃತಿಕ ಆರ್ಯದರ್ಶಿಯಾಗಿ ಗಣೇಶ್ ಆಚಾರ್ಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಯವರು ನೇಮಕಗೊಳಿಸಿ ಆದೇಶ ಹೊರಡಿಸಿರುತ್ತಾರೆ.
ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

0 ಕಾಮೆಂಟ್ಗಳು