ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಲಯನ್ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಲಯನ್ ಪ್ರಶಾಂತ್ ಶೀರೂರು, ಖಜಾಂಚಿಯಾಗಿ ಲಯನ್ ಸದಾಶಿವ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಲಯನ್ ಸುಧಾಕರ್ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳನ್ನು ಕ್ಲಬ್ನ ಸದಸ್ಯರು ಅಭಿನಂದಿಸಿ, ಅವರ ಸಮರ್ಥ ನೇತೃತ್ವದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳು, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಜನಪರ ಚಟುವಟಿಕೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಲಬ್ನ ಹಿರಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಆಡಳಿತ ಮಂಡಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ನೂತನ ತಂಡವು ಲಯನ್ಸ್ ಚಳವಳಿಯ ಧ್ಯೇಯೋದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜ ಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸಲಿ ಎಂದು ಸದಸ್ಯರು ಆಶಯ ವ್ಯಕ್ತಪಡಿಸಿದರು.

0 ಕಾಮೆಂಟ್ಗಳು