ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢ ಶಾಲಾ ಪ್ರಾರಂಭೋತ್ಸವವು ೦೧-೦೬-೨೦೨೬ ರಂದು ಬೆಳಿಗ್ಗೆ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ನಟರಾಜ ಉಪಾದ್ಯ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿವೃತ್ತ ಶಿಕ್ಷಕರಾಗಿರುವ ಪ್ರಭಾಕರ ಭಟ್ ಇವರು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಿದರು. ಜೊತೆಗೆ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡುವ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

0 ಕಾಮೆಂಟ್ಗಳು