ಪ್ರಕೃತಿಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂಬ ಉದಾತ್ತ ಸಂದೇಶದೊಂದಿಗೆ ಉಡುಪಿ ನಗರ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು ಸಾಕಾರಗೊಳಿಸುವ ಜಾಗತಿಕ ಅಭಿಯಾನವಾದ 'ಏಕ್ ಪೇಡ್ ಮಾ ಕೆ ನಾಮ್' (ಅಮ್ಮನ ಹೆಸರಲ್ಲಿ ಒಂದು ಗಿಡ) ಯೋಜನೆಯಡಿಯಲ್ಲಿ, 05-06-2026 ರಂದು ಸಗ್ರಿ ಶಾಲೆಯ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕರಾದ ಯಶ್ ಪಾಲ್ ಎ. ಸುವರ್ಣ ಅವರು ಮಾತನಾಡಿ, "ಬೆಳೆಯುತ್ತಿರುವ ನಗರೀಕರಣದ ಮಧ್ಯೆ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಗಿಡಗಳನ್ನು ನೆಟ್ಟು ಪೋಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಹೆತ್ತ ತಾಯಿಯ ನೆನಪಿನಲ್ಲಿ ಗಿಡ ನೆಡುವ ಈ ಅಭಿಯಾನವು ಪ್ರಕೃತಿಯೊಂದಿಗೆ ನಮ್ಮ ಭಾವನಾತ್ಮಕ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ" ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ನಿಕಟಪೂರ್ವ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ಸುಮಾಲತಾ, ಉಪಾಧ್ಯಕ್ಷರಾದ ನವೀನ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ವಿನಯ್ ನಾಯ್ಕ್ ಕೊಡವೂರು, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ದಾವೂದ್ ಅಬೂಬಕ್ಕರ್, ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಪದಾಧಿಕಾರಿಗಳಾದ ಪ್ರಜ್ಞಾ ಶೆಟ್ಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುಮಾ ನಾಯ್ಕ್ ಉಪಸ್ಥಿತರಿದ್ದರು. ಇವರೊಂದಿಗೆ ಸಗ್ರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಕುಸುಮಾ, ಶಾಲಾ ಶಿಕ್ಷಕ ವೃಂದದವರು, ಪಕ್ಷದ ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

0 ಕಾಮೆಂಟ್ಗಳು