BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ನಿಕಾನ್ ಡಿಎಸ್‌ಎಲ್‌ಆರ್ ಛಾಯಾಗ್ರಹಣ ಕಾರ್ಯಾಗಾರದಲ್ಲಿ ಆಸ್ಟ್ರೋ ಮೋಹನ್ ಸಂಪನ್ಮೂಲ ವ್ಯಕ್ತಿ

ಮಣಿಪಾಲದ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (ಎಂಸಿಒಡಿಎಸ್) ವತಿಯಿಂದ ಆಗಸ್ಟ್ 20ರಂದು ಆಯೋಜಿಸಲಾದ ನಿಕಾನ್ ಡಿಎಸ್‌ಎಲ್‌ಆರ್ ಛಾಯಾಗ್ರಹಣ ಕಾರ್ಯಾಗಾರದಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಹಿರಿಯ ಸುದ್ದಿ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಕಾರ್ಯಾಗಾರದಲ್ಲಿ ಅವರು ಛಾಯಾಗ್ರಹಣದ ಮೂಲತತ್ವಗಳು, ಕ್ಯಾಮೆರಾ ನಿರ್ವಹಣೆ, ಬೆಳಕಿನ ಸಮರ್ಪಕ ಬಳಕೆ, ಪೋರ್ಟ್ರೇಟ್ ಹಾಗೂ ಮ್ಯಾಕ್ರೋ ಛಾಯಾಗ್ರಹಣ ತಂತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಿದರು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಾಮಕಾರಿ ಛಾಯಾಗ್ರಹಣದ ಮಹತ್ವವನ್ನು ವಿವರಿಸಿದ ಅವರು, ಉತ್ತಮ ಚಿತ್ರ ನಿರ್ಮಾಣದಲ್ಲಿ ತಾಂತ್ರಿಕ ಜ್ಞಾನದೊಂದಿಗೆ ಸೃಜನಶೀಲ ದೃಷ್ಟಿಕೋನವೂ ಅತ್ಯಗತ್ಯ ಎಂದು ತಿಳಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಆಸ್ಟ್ರೋ ಮೋಹನ್, ಛಾಯಾಗ್ರಹಣ ಕ್ಷೇತ್ರದಲ್ಲಿನ ತಮ್ಮ ಸುದೀರ್ಘ ಅನುಭವ ಮತ್ತು ಒಳನೋಟಗಳನ್ನು ಹಂಚಿಕೊಂಡರು. ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನೀಡಿದ ಕೊಡುಗೆಯನ್ನು ಗುರುತಿಸಿ ಎಂಸಿಒಡಿಎಸ್ ವತಿಯಿಂದ ಆಸ್ಟ್ರೋ ಮೋಹನ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ನಿಕಾನ್ ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್, ಸಿಬ್ಬಂದಿಗಳಾದ ರೋಷನ್ ಮತ್ತು ಶ್ರೀನಿವಾಸ್, ಕಾಲೇಜಿನ ಫ್ಯಾಕಲ್ಟಿ ಅಡ್ವೈಸರ್‌ಗಳಾದ ಡಾ. ವಿನೀತಾ ಮತ್ತು ಡಾ. ಲಕ್ಷ್ಮಿ ಹಾಗೂ ಮಿರಾಜ್ ಕ್ಲಬ್ ಮುಖ್ಯಸ್ಥೆ ಡಾ. ಮೇಧವಿ ವರ್ಮಾ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!